Breaking News

ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ನೀವು ಗಂಡಸರಾ..?

Spread the love

ಬೆಂಗಳೂರು: ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ..

ಹೀಗಂತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರ ಫೋಟೋ ಹಾಕಿ ಭಜರಂಗದಳ ಕಾರ್ಯಕರ್ತರು ಪೋಸ್ಟ್ ಹಾಕುವ ಸಾಮಾಜಿಕ ಜಾಲತಾಣದಲ್ಲಿ ಸಿಟ್ಟು ಹೊರಹಾಕ್ತಿದ್ದಾರೆ.

 

ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಭಜರಂಗದಳದ ಫೇಸ್ ಬುಕ್‌ನಲ್ಲಿ ಬಳೆ ತೊಟ್ಟುಕೊಳ್ಳಿ,ಬಿಜೆಪಿ ನಾಯಕರೇ..

ಇನ್ನೆಷ್ಟು ಹಿಂದೂಗಳ ಬಲಿದಾನವಾಗಬೇಕು?ನಿಮ್ಮನ್ನು ಗಂಡಸರು ಎಂದು ಆರಿಸಿದೆವು..ಆದರೆ ನೀವು..? ಎಂದೆಲ್ಲಾ ಬರೆದು ಫೋಸ್ಟ್ ಮಾಡಲಾಗಿದೆ.

ಪ್ರಮುಖವಾಗಿ ಕೇವಲ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಇಡೀ ಕರ್ನಾಟಕದಲ್ಲಿ ಹಿಂದು ಪರ ಮುಖಂಡರು ಸಾಕಷ್ಟು ಸಿಟ್ಟಾಗಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಖುದ್ದು ಬೆಂಬಲಿಗರ ಆಕ್ರೋಶ ಹೆಚ್ಚಾಗಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮಹಾನಾಯಕರ ವಿರುದ್ಧ ಸಿಟ್ಟು ಹೊರಹಾಕ್ತಿದ್ದಾರೆ.

ಮುಖ್ಯವಾಗಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರನ್ನು ಟ್ರೋಲ್ ಮಾಡಿ ಬಿಜೆಪಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ