Breaking News

ಯಕ್ಸಂಬಾ ಪಟ್ಟಣದ ಜನರ ಅನುಕೂಲಕ್ಕಾಗಿ ಉಚಿತ ಆ್ಯಂಬುಲೆನ್ಸ್ ಸೇವೆ ಬಸವಪ್ರಸಾದ

Spread the love

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರ ವಿಶೇಷ ಪ್ರಯತ್ನದಿಂದ ೨೦೧೯ – ೨೦ ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾದ ೧೬.೫೦ ಲಕ್ಷ ರೂ ಮೊತ್ತದಲ್ಲಿ ಸುಸಜ್ಜಿತವಾದ ಜನರ ಹಿತಕ್ಕಾಗಿ ಉಚಿತ ಆಂಬುಲೆನ್ಸ್ ಸೇವೆಗೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಚಾಲನೆಯನ್ನು ನೀಡಿದರು.

ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರ ವಿಶೇಷ ಪ್ರಯತ್ನದಿಂದ ೧೦ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಂಸದರ ನಿಧಿಯಿಂದ ೧ ಕೋಟಿ ೬೮ ಲಕ್ಷ ರೂ. ಗಳಲ್ಲಿ ೧೦ ಆ್ಯಂಬುಲೆನ್ಸ್ಗಳನ್ನು ಹಸ್ತಾಂತರಿಸಲಾಗಿದೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ