Breaking News

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ

Spread the love

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಬೆಳ್ಳಾರೆ ನಿವಾಸಿ ಮೊಹ್ಮದ್‌ ಶಫೀಕ್‌ (27) , ಸವಣೂರು ನಿವಾಸಿ ಝಾಕೀರ್‌ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಇಂದು ಮದ್ಯಾಹ್ನ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ವಲಯ ಐಜಿ ದೇಚಜ್ಯೋತಿ ರೇ, ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ