Breaking News

ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು.. ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

Spread the love

ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಶ್ರೀಶೈಲ್ ಲಕ್ಷ್ಮಣ (13) ಹಾಗೂ ಲಕ್ಷ್ಮಣ ಗುಂಡಪ್ಪ(12) ಈಜಲು ಹೋಗಿ ಸಾವನ್ನಪ್ಪಿದ ದುರ್ದೈವಿಗಳು. ಈ ಇಬ್ಬರು ಮಕ್ಕಳು ಹೇಬಳಿ ರೋಡ್‌ ನ್ಯೂ ಬಾಳೇನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಇಬ್ಬರು ಈಜಲು ಎಂದು ಬಾವಿಗೆ ತೆರಳಿದ್ದಾರೆ. ಈಜು ಸರಿಯಾಗಿ ಬಾರದಿದ್ದರೂ ಬಾವಿಗೆ ಇಳಿದು ದುಸ್ಸಾಹಸ ಮಾಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳು ಸಾವನ್ನು ಕಂಡು ಸ್ಥಳೀಯರು ಸಹ ಕಣ್ಣೀರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ