Breaking News

ಕುಮಾರಸ್ವಾಮಿ ಭೇಟಿಗೆ ಊಹಾಪೋಹ ಬೇಡ – ಸಿದ್ದರಾಮಯ್ಯಗೆ ಬಿಎಸ್‍ವೈ ಟಾಂಗ್

Spread the love

ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬಿ.ವೈ ವಿಜಯೇಂದ್ರ ಸೂಪರ್ ಸಿಎಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದ ಬಿಎಸ್‍ವೈ, ವಿಜಯೇಂದ್ರ ಬಿಜೆಪಿಯಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ