Breaking News

ಇದಕ್ಕೆಲ್ಲ ಸರಕಾರದ ನೀತಿಯೇ ಕಾರಣ: ಹೈಕೋರ್ಟ್ ಅಸಮಾಧಾನ

Spread the love

ಬೆಂಗಳೂರು,: ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಸರಕಾರಿ ವಸತಿ ಶಾಲೆಗಳಿಗೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಇದಕ್ಕೆಲ್ಲ ಸರಕಾರದ ನೀತಿಯೆ ಕಾರಣವೆಂದು ಹೇಳಿದೆ.

ನವೋದಯ ವಸತಿ ಶಾಲೆಗಳು, ಮುರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು ನಡೆಸುತ್ತಿರುವ ವಸತಿ ಶಾಲೆಗಳ ನೂರಾರು ಶಿಕ್ಷಕರು ಹುದ್ದೆಗಳನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

 

ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಮಗುವಿನ ಜೀವನ ಮತ್ತು ಜೀವನವನ್ನು ರೂಪಿಸುವವರೇ ಶಿಕ್ಷಕರು. ಈ ಕಾರಣಕ್ಕಾಗಿಯೇ ಶಿಕ್ಷಕರಿಗೆ ಸೇವಾವಧಿಯ ಭದ್ರತೆಯ ಅಗತ್ಯವಿರುತ್ತದೆ ಎಂದು ನ್ಯಾಯಪೀಠವು ತಿಳಿಸಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ