ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ.
ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.