Breaking News

ಭ್ರಷ್ಟ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುವುದೇ ಎಎಪಿ ಗುರಿ:

Spread the love

ಬೆಂಗಳೂರು : ಮುಂಬರುವ ಬಿಬಿಎಂಪಿ (ಪಾಲಿಕೆ) ಚುನಾವಣೆ ಭ್ರಷ್ಟ ಬಿಜೆಪಿ ವಿರುದ್ಧ ಜನಸಾಮಾನ್ಯರು ನಡೆಸುವ ಹಣಾಹಣಿಯಾಗಲಿದೆ. ಪಕ್ಷ ಸ್ಥಾಪನೆಯ ಹತ್ತೇ ವರ್ಷದಲ್ಲಿ ದೇಶದೆಲ್ಲೆಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯ ಸಾಧಿಸಿದ್ದಲ್ಲದೇ, ಎರಡು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಆಮ್ ಆದ್ಮಿ ಪಾರ್ಟಿಯು ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದೆ.

ನಾವು ಕೆಲಸ ಮಾಡುತ್ತಿರುವುದರಿಂದ ಚುನಾವಣೆಗಳಲ್ಲಿ ಗೆಲ್ಲುತ್ತಿದ್ದೇವೆ.! ದೇಶದ ಜನರು “ಅರವಿಂದ್ ಕೇಜ್ರಿವಾಲ್ ಮಾದರಿ” ಅನ್ನು ಗುರುತಿಸಿದ್ದಾರೆ.

ಪಾಲಿಕೆ ಚುನಾವಣೆ ಯಾವ ಕ್ಷಣದಲ್ಲಾದರೂ ಘೋಷಣೆಯಾಗಬಹುದು. ಇದರ ನಿಮಿತ್ತ ಎಎಪಿ ಪ್ರಚಾರ ಸಮಿತಿಯೊಂದನ್ನು ರಚನೆ ಮಾಡಿದೆ. ಈ ಸಮಿತಿಯಲ್ಲಿರುವವರಿಗೆ ಬೆಂಗಳೂರು ಚೆನ್ನಾಗಿ ಗೊತ್ತಿದೆ, ನಗರದ ಜನರ ಕಷ್ಟಗಳ ಸಂಪೂರ್ಣ ಅರಿವಿದೆ. ನಗರಕ್ಕೆ ಮತ್ತು ನಾಡಿಗೆ ನೀಡಿರುವ ಸೇವೆಯಿಂದ ಜನರ ನಂಬಿಕೆ ಗಳಿಸಿದ್ದಾರೆ.
● ಭಾಸ್ಕರ್ ರಾವ್ – ಸಮಿತಿ ಅಧ್ಯಕ್ಷರು
● ಮುಖ್ಯಮಂತ್ರಿ ಚಂದ್ರು
● ಕೆ ಮಥಾಯಿ
● ಮೋಹನ್ ದಾಸರಿ
● ಲಕ್ಷ್ಮಿಕಾಂತ್ ರಾವ್

“ಈ ಸಮಿತಿಯು ಪಕ್ಷವನ್ನು ಗೆಲ್ಲಿಸಿ ಬೆಂಗಳೂರಿನಲ್ಲಿ ಒಂದು ಜನಪರ ಮತ್ತು ಪ್ರಾಮಾಣಿಕ ಪಾಲಿಕೆಯನ್ನು ಸ್ಥಾಪಿಸುತ್ತದೆ ಎಂದು ಪಕ್ಷಕ್ಕೆ ಸಂಪೂರ್ಣ ನಂಬಿಕೆಯಿದೆ.” ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಎಎಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಬಿಎಂಪಿ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ “ಜನರು ಪಾವತಿಸುವ ತೆರಿಗೆ ದುಡ್ಡು ಜನರ ಉದ್ಧಾರಕ್ಕೆ ಬಳಸಬೇಕೇ ಹೊರತು ರಾಜಕಾರಣಿಗಳ ಏಳ್ಗೆಗೆ ಅಲ್ಲ ಎಂಬುದನ್ನು ನಾವು ನಂಬಿದ್ದೇವೆ. ಸುಸಜ್ಜಿತ ಶಾಲೆಗಳು, ಆಸ್ಪತ್ರೆಗಳು, ಉತ್ತಮ ರಸ್ತೆ, ನೀರು, ವಿದ್ಯುತ್ ಮತ್ತು ಬೆಳವಣಿಗೆಗೆ ಪೂರಕವಾದ ಅವಕಾಶಗಳು – ಜನಜೀವನಕ್ಕೆ ಬೇಕಾದ್ದು ಇಷ್ಟೇ, ಇದು ಜನರ ಹಕ್ಕೂ ಕೂಡಾ. ಆಪ್‌ ದೇಶಕ್ಕೆ ಒಂದು ಮಾದರಿಯನ್ನು ತೋರಿಸಿದೆ, ಮತ್ತು ಅದನ್ನು ಮಾಡಿ ತೋರಿಸಿದೆ, ಬೇರೆ ಪಕ್ಷಗಳು ಕೇವಲ ಹೇಳಿಕೆಗಳಿಗೆ ಸೀಮಿತವಾಗಿವೆ.” ಎಂದರು

ಮುಂದುವರೆದು “ಕಳೆದ ವಾರವಷ್ಟೇ ಅಭ್ಯರ್ಥಿ ಶೋಧನಾ ಸಮಿತಿ ಯನ್ನು ರಚಿಸಿ ಘೋಷಣೆ ಮಾಡಿದ್ದೆವು, ಮಿಸ್ ಕಾಲ್ ಮತ್ತು ಈಮೇಲ್ ಮೂಲಕ ಸಂಪರ್ಕ ಮಾಡುವ ವ್ಯವಸ್ಥೆ ಕಲ್ಪಿಸಿದ್ದೆವು, ಇದರ ಮೂಲಕ 600ಕ್ಕೂ ಹೆಚ್ಚು ಜನರು ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಎಎಪಿ ಟಿಕೆಟ್ ನಲ್ಲಿ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ್ದಾರೆ. ವಾರ್ಡ್ ಮೀಸಲಾತಿ ಪ್ರಕಟಣೆಗೂ ಮುನ್ನವೇ ಇಷ್ಟು ಆಸಕ್ತರು ಬಂದಿರುವುದು, ಮೀಸಲಾತಿ ಘೋಷಣೆಯ ನಂತರ ಇನ್ನಷ್ಟು ಆಸಕ್ತರು ಬರುವುದು ಖಚಿತವಾಗಿ ಕಾಣುತ್ತದೆ” ಎಂದು ಹೇಳಿದರು.


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ