Breaking News

3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು

Spread the love

ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್‌ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ.

ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿ ಹೊಂದಿದವರು ಹಾಗೂ ಕಾರು ಮಾಲೀಕರು ಅಂತ್ಯೋದಯ ಹಾಗೂ ಆದ್ಯತಾ ಪಟ್ಟಿಯಲ್ಲಿರುವ ಕುಟುಂಬಗಳ (ಬಿಪಿಎಲ್‌) ಪಡಿತರ ಚೀಟಿ ಹೊಂದುವಂತಿಲ್ಲ.

ಹೀಗಿದ್ರೂ ಸುಳ್ಳು ಮಾಹಿತಿ ನೀಡಿ ಲಕ್ಷಾಂತರ ಮಂದಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಇಂಥವರು ಸ್ವಯಂಪ್ರೇರಿತವಾಗಿ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಗಡುವು ನೀಡಿತ್ತು. ಸರ್ಕಾರದ ಸೂಚನೆ ಪಾಲಿಸಿ ಪಡಿತರ ಚೀಟಿಯನ್ನು ಒಪ್ಪಿಸಿದವರು ವಿರಳ. ಹೀಗಾಗಿ, ಅನರ್ಹ ಚೀಟಿಗಳ ಪತ್ತೆಗೆ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ