Home / ರಾಜಕೀಯ / ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು

ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು

Spread the love

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ ಕೈಗೊಳ್ಳಲಾಗಿದೆ.

 

ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ದಾವಣಗೆರೆಯ ಲಾಡ್ಜ್, ಛತ್ರಗಳು, ಮಠಗಳು ಸೇರಿ 38,000 ರೂಮುಗಳನ್ನು ಬುಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 1300 ಬಸ್ಸುಗಳನ್ನು ಸಿದ್ದರಾಮಯ್ಯ ಅಭಿಮಾನಿಗಳನ್ನು ಕರೆತರಲು ಬುಕ್ ಮಾಡಲಾಗಿದ್ದು, ಇದರ ಜೊತೆಗೆ 30,000ಕ್ಕೂ ಅಧಿಕ ಖಾಸಗಿ ವಾಹನಗಳು ದಾವಣಗೆರೆಗೆ ಬರಲಿವೆ. ಅಲ್ಲದೆ ಬೀದರ್ ನಿಂದ ದಾವಣಗೆರೆಗೆ ವಿಶೇಷ ರೈಲು ಕಲ್ಪಿಸಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್ ನಿಂದ ಹೊರಡುವ ರೈಲು ಬುಧವಾರ ದಾವಣಗೆರೆ ತಲುಪಲಿದೆ.

ಆಗಮಿಸುವ ಪ್ರತಿಯೊಬ್ಬರಿಗೂ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ವಿಶೇಷವೆಂದರೆ ವಿಐಪಿ ಗಳಿಂದ ಸಾಮಾನ್ಯರವರೆಗೆ ಎಲ್ಲರಿಗೂ ಒಂದೇ ಬಗೆಯ ಊಟ ಬಡಿಸಲಾಗುತ್ತದೆ. 6.50 ಲಕ್ಷ ಮೈಸೂರ್ ಪಾಕುಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಇದರ ಜೊತೆಗೆ ಪಲಾವ್, ಬಿಸಿಬೇಳೆ ಬಾತ್ ಹಾಗೂ ಮೊಸರನ್ನ ನೀಡಲಾಗುತ್ತದೆ.

1500 ಲೀಟರ್ ಹಾಲು, 2,000 ಕೆಜಿ ತುಪ್ಪ, 2000 ಕೆಜಿ ಕಡ್ಲೆಹಿಟ್ಟು ಬಳಸಿ ಸ್ಪೆಷಲ್ ಮೈಸೂರ್ ಪಾಕ್ ತಯಾರಿಸಲಾಗಿದ್ದು, ಇದರ ಜೊತೆಗೆ ಅಡುಗೆಗೆ 80 ಟನ್ ಅಕ್ಕಿ ,15 ಟನ್ ತೊಗರಿ ಬೇಳೆ, 8 ಟನ್ ಬೆಲ್ಲ, 6 ಟನ್ ಒಣಕೊಬ್ಬರಿ, 10 ಟನ್ ಸೂರ್ಯಕಾಂತಿ ಎಣ್ಣೆ, 7 ಟನ್ ನಂದಿನಿ ತುಪ್ಪ, 8 ಟನ್ ಟೊಮೇಟೊ, 15 ಟನ್ ಈರುಳ್ಳಿ, 6 ಕ್ವಿಂಟಲ್ ಬೆಳ್ಳುಳ್ಳಿ, 7000 ತೆಂಗಿನಕಾಯಿ, 4000 ಹೂಕೋಸು, 25,000 ನಿಂಬೆಹಣ್ಣುಗಳನ್ನು ಬಳಸಿಕೊಳ್ಳಲಾಗುತ್ತಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ