Breaking News

ಅಲೋಕ್​ ಕುಮಾರ್​ ಎಚ್ಚರಿಕೆಗೆ ಹೆದರಿ ಕೋರ್ಟ್​ಗೆ ಶರಣಾದ ಭೀಮಾತೀರದ ಕುಖ್ಯಾತ ಹಂತಕನ ಪತ್ನಿ

Spread the love

ವಿಜಯಪುರ: ಎಡಿಜಿಪಿ ಅಲೋಕ್​ ಕುಮಾರ್​ ಖಡಕ್​ ಎಚ್ಚರಿಕೆಗೆ ಹೆದರಿದ ಭೀಮಾತೀರದ ಕುಖ್ಯಾತ ಹಂತಕ ಮಲ್ಲಿಕಾರ್ಜುನ್ ಚಡಚಣನ ಪತ್ನಿ ವಿಮಲಾಬಾಯಿ ಚಡಚಣ ನ್ಯಾಯಾಲಯಕ್ಕೆ ಆಗಮಿಸಿ ಬಂದು ಶರಣಾಗಿದ್ದಾಳೆ.

ವಿಜಯಪುರ 4ನೇ JMFC ನ್ಯಾಯಾಲಯಕ್ಕೆ ಆಗಮಿಸಿ ವಿಮಲಾಬಾಯಿ ಶರಣಾಗಿದ್ದಾಳೆ.

2020ರ ನವೆಂಬರ್ 2 ರಂದು ಮಹಾದೇವ ಸಾಹುಕಾರ ಬೈರಗೊಂಡ ಮೇಲೆ ನಡೆದ ದಾಳಿಯ ಬಳಿಕ ವಿಮಲಾಬಾಯಿ ಭೂಗತಳಾಗಿದ್ದಳು. ಕೆಲ ದಿನಗಳ ಹಿಂದಷ್ಟೇ ಅಲೋಕ್​ ಕುಮಾರ್​ ಅವರು ಭೂಗತರಾದ ಚಡಚಣ ಗ್ಯಾಂಗ್‌ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು.

ಕೋರ್ಟ್​ ಮುಂದೆ ಶರಣಾಗಿ, ಇಲ್ಲದಿದ್ದರೆ ಆಸ್ತಿ ಜಪ್ತಿ ಮಾಡಲಾಗುವುದು ಎಂದು ಭೀಮಾತೀರದ ಮಾಸ್ಟರ್ ಮೈಂಡ್ ನಟೋರಿಯಸ್ ಹಂತಕ ಮಲ್ಲಿಕಾರ್ಜುನ್ ಚಡಚಣ, ಆತನ ಪತ್ನಿ ವಿಮಲಾಬಾಯಿಗೆ ಅಲೋಕ್​ ಕುಮಾರ್​ ಖಡಕ್​ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಇಬ್ಬರ ವಿರುದ್ಧವು ಪೊಲೀಸ್​ ಇಲಾಖೆ ಉದ್ಘೋಷಣೆ ಸಹ‌ ಹೊರಡಿಸಿತ್ತು.

ಇದೀಗ ಆಸ್ತಿ ಜಪ್ತಿಯಾಗುವ ಭಯದಿಂದ ವಿಮಲಾಬಾಯಿ ಹಾಗೂ ಸಹಚರ ಸೋನ್ಯಾ ರಾಠೋಡ ಕೋರ್ಟ್​ಗೆ ಹಾಜರಾಗಿದ್ದಾರೆ. ಮಹಾದೇವ ಬೈರಗೊಂಡ ಮೇಲೆ ನಡೆದ ದಾಳಿಯಲ್ಲಿ ವಿಮಲಾಬಾಯಿ ಎ2 ಹಾಗೂ ಸೋನ್ಯಾ ರಾಠೋಡ ಎ39 ಆರೋಪಿಯಾಗಿದ್ದಾರೆ. ಇಂದು ಇಬ್ಬರು ಬಂದು 4ನೇ JMFC ನ್ಯಾಯಾಲಯಕ್ಕೆ ಶರಾಗಿದ್ದಾರೆ.

ವಿಮಲಾಬಾಯಿ ಮತ್ತು ಸೋನ್ಯಾ ರಾಠೋಡನ್ಯಾಯಾಲಯ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಕೋರ್ಟ್​ನಿಂದ ಅನುಮತಿ ಪಡೆದ ಬಳಿಕ ಪೊಲೀಸರು, ವಿಮಲಾಬಾಯಿ ವಿಚಾರಣೆ ನಡೆಸಲಿದ್ದಾರೆ. ಮಹಾದೇವ ಸಾಹುಕಾರ ಬೈರಗೊಂಡ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಇಬ್ಬರನ್ನೂ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ


Spread the love

About Laxminews 24x7

Check Also

:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ‌*

Spread the love ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ