Breaking News

ಭಾರೀ ಮಳೆಗೆ ಧರೆಗುರುಳಿ ಕಾರಿನ ಮೇಲೆ ಬಿದ್ದ ಮರ: ಕರೆ ಮಾಡಿ ತಿಳಿಸಿದ್ರು ಕ್ಯಾರೆ ಎನ್ನದ ಬಿಬಿಎಂಪಿ ಸಿಬ್ಬಂದಿ

Spread the love

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಿಲಿಕಾನ್​ ಸಿಟಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಚಲಿಸುತ್ತಿದ್ದ ಕಾರಿನ‌ ಮೇಲೆ ಬೃಹತ್​ ಮರ ಬಿದ್ದ ಘಟನೆ ನಾಗರಭಾವಿ-ಬೆಂಗಳೂರು ಯೂನಿವರ್ಸಿಟಿ ರಸ್ತೆಯಲ್ಲಿ ನಡೆದಿದೆ.

ಕಾರಿನ ಬಾನೆಟ್​ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರೇ ಕರೆ ಮಾಡಿದರೂ ಘಟನಾ ಸ್ಥಳಕ್ಕೆ ಬರಲು ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ.

ಸುಮಾರು ನಾಲ್ಕು ಗಂಟೆಯ ಬಳಿಕ ಬಿಬಿಎಂಪಿ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದರು. ಘಟನೆ ನಡೆದಿದ್ದು ರಾತ್ರಿ 9.30ರ ಸುಮಾರಿಗೆ. ಕೂಡಲೇ ಘಟನಾ ಸ್ಥಳಕ್ಕೆ ಭೇಟಿ‌ ನೀಡಿದ ಟ್ರಾಫಿಕ್​ ಸಿಬ್ಬಂದಿ ಬಿಬಿಎಂಪಿಗೆ ಮಾಹಿತಿ ನೀಡಿದರು. ಆದ್ರೆ ನಾಲ್ಕು ಗಂಟೆ ಘಟನಾ ಸ್ಥಳಕ್ಕೆ ಬಾರದೆ ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳು ಬೇಜವಬ್ದಾರಿ ಮೆರೆದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ