Breaking News

ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ

Spread the love

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸಂಕಲ್ಪದಿಂದ ಸಿದ್ಧಿಯ 3 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಯಲಹಂಕದ ಡೈರಿ ಘಟಕಕ್ಕೆ ಭೇಟಿ ನೀಡಿ ವಾಪಸ್ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗಲಿದ್ದಾರೆ.


Spread the love

About Laxminews 24x7

Check Also

ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ

Spread the loveಬೆಂಗಳೂರು: ಗುತ್ತಿಗೆದಾರರಿಗೆ  38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾ.5 ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ