Breaking News

: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದ ಅಶ್ವತ್ಥ ನಾರಾಯಣ .

Spread the love

ಬೆಳಗಾವಿ: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಆಗ್ರಹಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ರಾಜಕೀಯ ನಿವೃತ್ತಿ ಪಡೆಯಬೇಕು.

ಔಟ್‌ಡೇಟೆಡ್‌ ಮಾಡಲ್‌ಗ‌ಳು ಎಲ್ಲ ಆಯ್ತು. ಐದು ವರ್ಷ ಜನ ಭಾರ ಹೊತ್ತುಕೊಂಡಿದ್ದರು. ಇನ್ನು ಯಾರು ಭಾರ ಹೊರುವವರು ಎಂದು ಟೀಕಿಸಿದರು. ಜತೆಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನೂ ತಿಳಿಸಿದರು.

ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ ಇದ್ದರೂ ರಾಜಕೀಯ ಕಾರ್ಯಕ್ರಮವೇ. ಆದರೆ ಒಳ್ಳೆಯ ವಿಚಾರ ಹಾಗೂ ಒಳ್ಳೆಯ ಉದ್ದೇಶಕ್ಕಾಗಿ ಏನು ಮಾಡಿ ದರೂ ಒಳ್ಳೆಯದು ಎಂದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ