Breaking News

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ ಮಾಡುತ್ತ ಸಂಚರಿಸುತ್ತಿರುವುದು ಕಂಡುಬಂತು. ಹಳೇ ಪಿ.ಬಿ. ರಸ್ತೆ ಮೇಲ್ಸೇತುವೆ ಪಕ್ಕದ ಸರ್ವೀಸ್‌ ರಸ್ತೆ, ಹಿಂದವಾಡಿಯ ಕೆಲ ಅಪಾರ್ಟ್‌ಮೆಂಟ್‌ಗಳ ನೆಲ ಮಹಡಿಗೂ ಮಳೆ ನೀರು ‌ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಶಿವಬಸವ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ರಸ್ತೆಯಲ್ಲೂ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಮಳೆಯಿಂದಾಗಿ ಕೇಂದ್ರ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್‌, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾ ಯಿತು. ಜನರು ರಸ್ತೆಯ ಇಕ್ಕೆಲ ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ ವರೆಗೂ ಮಳೆ ಮುಂದುವರಿದಿತ್ತು. ಪೊಲೀಸ್‌ ಉಪಠಾಣೆ ಮುಳುಗಡೆ: ರಾಮದುರ್ಗ ತಾಲ್ಲೂಕಿನ ಸುರೇಬಾನ – ಮನಿಹಾಳ ಗ್ರಾಮದಲ್ಲಿನ ರಸ್ತೆ ಗಳು ಕೆರೆಯಂತಾದವು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಸುರೇಬಾನ ಪೊಲೀಸ್ ಉಪಠಾಣೆ ಮುಳುಗಡೆಯಾಗಿತ್ತು. ಗ್ರಾಮದ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾ ವಿದ್ಯಾಲಯದ ಆಟದ ಮೈದಾನ‌ವೂ ಜಲಾವೃತವಾಗಿತ್ತು. ರಸ್ತೆ ಮೇಲೆ ಅಪಾರ ಪ್ರಮಾಣ ನೀರು ಹರಿದಿದ್ದರಿಂದ ವಾಹನ ಸಂಚಾರರು ಪರದಾಡಿದರು. ವಿದ್ಯಾರ್ಥಿಗಳು ಸೈಕಲ್ ಮೇಲೆ ಸಾಗಿದರು.

Spread the love

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು.

 

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ.
ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ-
ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ ಮಾಡುತ್ತ ಸಂಚರಿಸುತ್ತಿರುವುದು ಕಂಡುಬಂತು.

ಹಳೇ ಪಿ.ಬಿ. ರಸ್ತೆ ಮೇಲ್ಸೇತುವೆ ಪಕ್ಕದ ಸರ್ವೀಸ್‌ ರಸ್ತೆ, ಹಿಂದವಾಡಿಯ ಕೆಲ ಅಪಾರ್ಟ್‌ಮೆಂಟ್‌ಗಳ ನೆಲ
ಮಹಡಿಗೂ ಮಳೆ ನೀರು ‌ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಶಿವಬಸವ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ರಸ್ತೆಯಲ್ಲೂ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು.

ಮಳೆಯಿಂದಾಗಿ ಕೇಂದ್ರ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್‌, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾ
ಯಿತು. ಜನರು ರಸ್ತೆಯ ಇಕ್ಕೆಲ
ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ
ವರೆಗೂ ಮಳೆ ಮುಂದುವರಿದಿತ್ತು.

ಪೊಲೀಸ್‌ ಉಪಠಾಣೆ ಮುಳುಗಡೆ: ರಾಮದುರ್ಗ ತಾಲ್ಲೂಕಿನ ಸುರೇಬಾನ – ಮನಿಹಾಳ ಗ್ರಾಮದಲ್ಲಿನ ರಸ್ತೆ
ಗಳು ಕೆರೆಯಂತಾದವು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಸುರೇಬಾನ ಪೊಲೀಸ್ ಉಪಠಾಣೆ ಮುಳುಗಡೆಯಾಗಿತ್ತು.

ಗ್ರಾಮದ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾ
ವಿದ್ಯಾಲಯದ ಆಟದ ಮೈದಾನ‌ವೂ ಜಲಾವೃತವಾಗಿತ್ತು. ರಸ್ತೆ ಮೇಲೆ ಅಪಾರ ಪ್ರಮಾಣ ನೀರು ಹರಿದಿದ್ದರಿಂದ ವಾಹನ ಸಂಚಾರರು ಪರದಾಡಿದರು. ವಿದ್ಯಾರ್ಥಿಗಳು ಸೈಕಲ್ ಮೇಲೆ ಸಾಗಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ