Home / ಜಿಲ್ಲೆ / ರಾಯಚೂರು / ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ

ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ

Spread the love

ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ.

ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಳ್ಳಗಳೆಲ್ಲ ನೀರಿನಿಂದ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಇದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡಚಣೆಯಾಗಿ ತೊಂದರೆ ಅನುಭವಿಸುವಂತೆ ಆಗಿದೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ