ಒಂದೇ ಬೈಕಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂದುಮಂಗಳೂರುಕಾನೂನು ಸುವ್ಯವಸ್ಥೆ ಪೊಲೀಸರು ಆದೇಶ ಹೊರಡಿಸಿದ್ದು, ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ.
ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕರಾವಳಿಯಲ್ಲಿ ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಈ ನಿಯಮ ನಾಳೆಯಿಂದ ಅಂದರೆ ಆಗಸ್ಟ್ ೫ರಿಂದ ಜಾರಿಗೆ ಬರಲಿದೆ ಎಂದರು.
ನಾಳೆಯಿಂದ ಒಂದು ವಾರ ಕಾಲ ಈ ನಿಯಮ ಜಾರಿಗೆ ಬರಲಿದ್ದು, ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಸಿಬ್ಬಂದಿ ಪ್ರಯಾಣಿಸುವಂತಿಲ್ಲ. ಆದರೆ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿಯಮ ಜಾರಿಗೆ ತರಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಮಾದರಿಯ ಕಾನೂನು ಜಾರಿಗೆ ತರಲಾಗಿದೆ. ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಲೋಕ್ ಕುಮಾರ್ ವಿವರಿಸಿದರು.