Breaking News

ಅನೈತಿಕ ಸಂಬಂಧಕ್ಕೆ ಶಿಕ್ಷಕಿ ಬಲಿ: 6 ತಿಂಗಳ ಬಳಿಕ ಆರೋಪಿಗಳ ಹೆಡೆಮುರಿ ಕಟ್ಟಿದ ನಂಜನಗೂಡು ಪೊಲೀಸರು

Spread the love

ಮೈಸೂರು: ಆರು ತಿಂಗಳ ಹಿಂದೆ ನಡೆದಿದ್ದ ಶಿಕ್ಷಕಿ ನಿಗೂಢ ಸಾವಿನ ಪ್ರಕರಣವನ್ನು ನಂಜನಗೂಡು ಪೊಲೀಸರು ಕೊನೆಗೂ ಭೇದಿಸಿದ್ದು, ನಗರಸಭಾ ಸದಸ್ಯೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ನಂಜನಗೂಡು 5ನೇ ವಾರ್ಡ್ ನಗರಸಭಾ ಸದಸ್ಯೆ ಗಾಯತ್ರಿ, ಭಾಗ್ಯ, ನಾಗಮ್ಮ ಮತ್ತು ಕುಮಾರ್ ಬಂಧಿತರು.

ಕಳೆದ ಮಾರ್ಚ್ 9 ರಂದು ಶಿಕ್ಷಕಿ ಸುಲೋಚನಾ ಅನುಮಾನಸ್ಪಾದವಾಗಿ ಮನೆಯಲ್ಲಿ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ನಿಗೂಢ ಸಾವಿನ ಪ್ರಕರಣ ಬೆನ್ನತ್ತಿದ್ದ ನಂಜನಗೂಡು ಪೊಲೀಸರಿಗೆ ಒಂದು ಮಹತ್ವದ ಸುಳಿವು ದೊರೆಯಿತು.

ಯಾವುದು ಆ ಸುಳಿವು ಅಂದರೆ, ಶಿಕ್ಷಕಿ ಸುಲೋಚನಾ ಹಾಗೂ ಗಾಯತ್ರಿ ಪತಿ ಮುರುಗೇಶ್ ನಡುವೆ ಅಕ್ರಮ ಸಂಬಂಧ ಇದ್ದಿದ್ದು. ಮರುಗೇಶ್​ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಡಿ ಗ್ರೂಪ್ ನೌಕರನಾಗಿದ್ದಾರೆ. ಅಕ್ರಮ ಸಂಬಂಧ ವಿಚಾರವಾಗಿ ಗಾಯತ್ರಿ ಮತ್ತು ಮುರುಗೇಶ್​ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿತ್ತು. ಎಷ್ಟೇ ಗಲಾಟೆ ಮಾಡಿ, ಬುದ್ಧಿಮಾತು ಹೇಳಿದರು ಮುರುಗೇಶ್​ ಮಾತ್ರ ಸುಲೋಚನಾ ಸಹವಾಸವನ್ನು ಬಿಟ್ಟಿರಲಿಲ್ಲ.

ಕೊನೆಗೆ ಶಿಕ್ಷಕಿ ಸುಲೋಚನಾ ಕೊಲೆಗೆ ಸಂಚು ರೂಪಿಸಿದ ಗಾಯತ್ರಿ ತನ್ನ ಸಂಬಂಧಿಕರ ಸಹಾಯದೊಂದಿಗೆ ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ. ಘಟನೆ ನಡೆದು ಆರು ತಿಂಗಳ ಬಳಿಕ‌ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

Spread the loveಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ