Breaking News

ಸಿದ್ದರಾಮೋತ್ಸವದ ಸಂಭ್ರಮದಲ್ಲಿದ್ದ ಶಾಸಕ ಪಾಟೀಲ್​ಗೆ ಆಘಾತ: ವಾಪಸ್​ ಬರುವಾಗ ಕಾಲು ಮುರಿತ!

Spread the love

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವು ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಿನ್ನೆ (ಬುಧವಾರ) ನಡೆದಿದೆ. ಲಕ್ಷ ಲಕ್ಷ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಹಾರೈಸಿದ್ದಾರೆ. ಕಾಂಗ್ರೆಸ್​ನ ಬಹುತೇಕ ಎಲ್ಲಾ ನಾಯಕರೂ ಹುಟ್ಟುಹಬ್ಬದಂದು ದಾವಣಗೆರೆಯ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

 

ಕಲಬುರಗಿಯ ಜಿಲ್ಲೆಯ ಅಫಜಲಪುರ ಶಾಸಕ ಎಂ.ವೈ. ಪಾಟೀಲ್ ಅವರು ಕೂಡ ದಾವಣಗೆರೆಗೆ ತೆರಳಿ ಅಲ್ಲಿ ಸಿದ್ದರಾಮಯ್ಯನವರಿಗೆ ಶುಭ ಹಾರೈಸಿದ್ದರು. ಅದೇ ಸಂತಸದಲ್ಲಿ ವಾಪಸ್​ ಬಂದಿದ್ದ ಶಾಸಕ ಪಾಟೀಲ್​ ಅವರು ಇಂದು ಬೆಳಗ್ಗೆ ಕಾಲು ಮುರಿದುಕೊಂಡಿದ್ದಾರೆ.

ಹುಬ್ಬಳ್ಳಿಯ ಸರ್ಕಿಟ್ ಹೌಸ್​ನಲ್ಲಿ ಈ ದುರಂತ ನಡೆದಿದೆ. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಜಾರಿ ಬಿದ್ದು ಅವಘಡ ಸಂಭವಿಸಿದೆ. ಕೂಡಲೇ ಅವರ ಬೆಂಬಲಿಗರು ಆಸ್ಪತ್ರೆಗೆ ಶಾಸಕರನ್ನು ರವಾನೆ ಮಾಡಿದ್ದಾರೆ. ಪ್ರಾಣಕ್ಕೆ ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ಶಾಸಕರು ತೀವ್ರವಾದ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಸಿದ್ದರಾಮೋತ್ಸವದಲ್ಲಿ ಪಾಲ್ಗೊಂಡು ವಾಪಸ್​ ಊರಿಗೆ ಹೊರಟಿದ್ದ ಶಾಸಕ ಪಾಟೀಲ್​ ಅವರು ಹುಬ್ಬಳ್ಳಿಯಲ್ಲಿ ಉಳಿದುಕೊಂಡಿದ್ದರು. ಇಂದು ಸ್ನಾನ ಮುಗಿಸಿ ಅವರು ವಾಪಸ್​ ಊರಿಗೆ ಹೋಗಬೇಕಿತ್ತು. ಆದರೆ ಈ ನಡುವೆಯೇ ಅವಘಡ ಸಂಭವಿಸಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ