Breaking News

ಮನೆಯಲ್ಲಿ ಕತ್ತಿ ಸುಳಿಬಾರದು, ಕೊಲೆ ಆಗಬಾರದು ಅಂದ್ರೆ ಹಿಂದೂಗಳ ಬಳಿ ವ್ಯವಹರಿಸಿ; ಮುತಾಲಿಕ್ ಕರೆ

Spread the love

ಧಾರವಾಡ: ಸಾರ್ವಜನಿಕ ಗಣೇಶೋತ್ಸವಕ್ಕೆ (Ganeshotsava) ಸರ್ಕಾರ (Government) ಹಲವು ನಿರ್ಬಂಧ ಹಾಕುತ್ತಿದೆ. ಇದರಿಂದ ಎಷ್ಟೊಂದು‌ ಕಿರಿಕಿರಿ ಆಗುತ್ತಿದೆ. ನಮಗೆ ಸ್ವಾತಂತ್ರ್ಯವೇ ಇಲ್ಲವಾಗಿದೆ. ಸರ್ಕಾರದ ಈ ನೀತಿಯನ್ನು ನಾನು ವಿರೋಧಿಸುತ್ತೆನೆ. ಇದು ಬಿಜೆಪಿ ಸರ್ಕಾರದಲ್ಲೇ (BJP Government) ಹೀಗಾಗುತ್ತಿದೆ ಎಂದರೆ ಹೇಗೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಅವರು ಧಾರವಾಡದಲ್ಲಿ (Dharwad) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರ್ಷಕ್ಕೊಮ್ಮೆ ಗಣೇಶೋತ್ಸವ ಹಬ್ಬ (Ganesha Festival 2022) ಬರುತ್ತದೆ. ಎಲ್ಲರೂ ಏಕತೆ ಮೂಡಿಸುವ ಹಬ್ಬ ಇದಾಗಿದೆ. ಅದರಲ್ಲೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಿದರಿಂದ ಎಲ್ಲರಲ್ಲೂ ಒಗ್ಗಟ್ಟು ಮೂಡುತ್ತದೆ. ಆದ್ರೆ ಸರ್ಕಾರದ ನಿಬಂಧನೆಗಳಿಂದ ತೊಂದರೆ ಆಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ವಿದ್ಯುತ್, ಪೆಂಡಾಲ್, ಸ್ಪೀಕರ್, ಪೋಲಿಸ್ ಸ್ಟೇಷನ್, ಕಾರ್ಪೊರೇಷನ್ ಹಾಗೂ ಅಗ್ನಿಶಾಮಕ ದಳ ಪರವಾನಿಗೆ ಸಹ ಪಡೆಯಬೇಕಿದೆ. ಇದು ಎಷ್ಟೊಂದು‌ ಕಿರಿಕಿರಿ ಆಗುತ್ತಿದೆ. ನಮಗೆ ಸ್ವಾತಂತ್ರ್ಯವೇ ಇಲ್ಲವಾಗಿದೆ. ಸರ್ಕಾರದ ಈ ನೀತಿಯನ್ನು ನಾನು ವಿರೋಧಿಸುತ್ತೇನೆ ಎಂದು ಕಿಡಿಕಾರಿದರು.

ಒಂದೇ ಕಡೆ ಅನುಮತಿ ನೀಡಿ

ಕರ್ನಾಟಕ ಒನ್ ಅಂತಾ ಸರ್ಕಾರ ಮಾಡಿದೆ. ಎಲ್ಲ ಬಿಲ್‌ಗಳನ್ನು ಒಂದೇ ಕಡೆ ತುಂಬುವ ಪ್ರಕ್ರಿಯೆ ಇದರಲ್ಲಿದೆ. ಅದೇ ಮಾದರಿಯಲ್ಲಿ ಗಣೇಶೋತ್ಸವಕ್ಕೆ ಒಂದೇ ಕಡೆ ಅನುಮತಿ ಕೊಡಬೇಕು. ಒಂದೇ ಕಡೆಗೆ ಅನುಮತಿ ವ್ಯವಸ್ಥೆ ಮಾಡಬೇಕು, ಸುಮ್ಮನೆ ಓಡಾಡಿಸುವುದು, ಸುತ್ತಾಡಿಸುವುದು ಬಿಡಬೇಕು ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ