Breaking News

ಇನ್ನೊಂದು ನೇಮಕ‌ ಹಗರಣ ಬಯಲು: ಬಿಜೆಪಿ ಸರಕಾರಕ್ಕೆ ಮತ್ತೆ ಮುಜುಗರ

Spread the love

ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.

ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ