Breaking News

ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ;

Spread the love

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ.

ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ ಚಲಾಯಿಸಿ ದುಸ್ಸಾಹಸ ಮೆರೆದಿದ್ದಾನೆ. ಒಂದು ಹಂತದಲ್ಲಿ ಬಸ್ ನದಿಗೆ ವಾಲಿದ್ದು,ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ