Breaking News

ಹುಬ್ಬಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಾಯಗೊಂಡಿದ್ದಾರೆ.

Spread the love

ಹುಬ್ಬಳ್ಳಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಸ್ತೆಯಲ್ಲಿ ರಸ್ತೆ ದುರಂತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡರು. ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ದುರ್ಘಟನೆ ನಡೆಯಿತು. ಮೃತರನ್ನು ಹನಮಂತಪ್ಪ ಬೇವಿನಕಟ್ಟ ಮತ್ತು ಪತ್ನಿ ರೇಣುಕಾ ಬೇವಿನಕಟ್ಟಿ ಹಾಗು ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾಗೆ ಗುದ್ದಿದೆ. ಪರಿಣಾಮ, ಕಾರಿನಲ್ಲಿದ್ದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ