Breaking News

ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ

Spread the love

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ‌ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ,

ನನಗೂ 61 ವರ್ಷ ವಯಸ್ಸಾಗಿದ್ದು ಬುದ್ಧಿ ಇದೆ, ಅದನ್ನು ದೊಡ್ಡದು ಮಾಡಿ ವಿವಾದ ಮಾಡುವ ಅಗತ್ಯವಿಲ್ಲ, ಬೇಕಾದರೇ ನಾನು ಹಾಕಿಕೊಳ್ಳುವ ಶೂನ್ನು ಪರಿಶೀಲಿಸಬಹುದು, ಬಟ್ಟೆಯಿಂದ ಮಾಡಿರುವುದು ಎಂದು ಸಮಜಾಯಿಷಿ ಕೊಟ್ಟರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ