Breaking News

ದರ್ಶನ್ ಕ್ಷಮೆ ಕೇಳಲೇಬೇಕು ಪುನೀತ್ ಫ್ಯಾನ್ಸ್ ಆಕ್ರೋಶ!

Spread the love

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ.

ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು ಕ್ರಾಂತಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವಾಗಲೇ ದರ್ಶನ್ ಸುತ್ತ ಮತ್ತೊಂದು ವಿವಾದ ಸುತ್ತಿಕೊಂಡಿದೆ.

ದರ್ಶನ್ ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ‘ಕ್ರಾಂತಿ’ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡುವುದಿಲ್ಲ ಅಂತ ಪಟ್ಟು ಹಿಡಿದು ಕೂತಿದ್ದಾರೆ. ಅಷ್ಟಕ್ಕೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಡಿಮ್ಯಾಂಡ್ ಏನು? ದರ್ಶನ್ ಹೇಳಿಕೆ ಬಗ್ಗೆ ಅವರು ಏನಂತಿದ್ದಾರೆ? ಅನ್ನೋದನ್ನು ತಿಳಿಯಲು ಮುಂದೆ ಓದಿ.

By Muralidhar S
ಅಪ್ಪು ಸಾವಿನ ಬಗ್ಗೆ ಮಾತಾಡಿ ಪೇಚಿಗೆ ಸಿಲುಕಿದ ದರ್ಶನ್
 ದರ್ಶನ್ ಸಂದರ್ಶನದ ವೇಳೆ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದರು. “ಸಹಜವಾಗಿ ನಾವು ಸತ್ತಮೇಲೆ ನೋಡಿದ್ದೇವೆ. ಫ್ಯಾನ್ಸ್‌ಗಳು ಅಂದ್ರೆ ಹೇಗೆ ಎಂದು. ಪುನೀತ್ ರಾಜ್‌ಕುಮಾರ್ ಒಬ್ಬರದ್ದೇ ಸಾಕು. ಫ್ಯಾನ್ಸ್‌ಗಳು ನಾನು ಬದುಕಿದ್ದಾಗಲೇ ತೋರಿಸಿ ಬಿಟ್ಟರಲ್ಲ ನನಗೆ ಅಷ್ಟೇ ಸಾಕು ಅನಿಸಬಿಡ್ತು. ಬಿಡಯ್ಯ ಇದಕ್ಕಿಂತ ಇನ್ನೇನು ಬೇಕು.” ಅಂತ ಹೇಳಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ದರ್ಶನ್ ಕ್ಷಮೆ ಕೇಳಬೇಕು

ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು ಅಪ್ಪು ಅಭಿಮಾನಿಗಳಿಗೆ ಹಿಡಿಸಿಲ್ಲ. ಹೀಗಾಗಿ ಬೆಂಗಳೂರು, ಹೊಸಪೇಟೆ, ಬಳ್ಳಾರಿ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಪ್ಪು ಸಾವಿನ ಬಗ್ಗೆ ಮಾತಾಡಿದ್ದಕ್ಕೆ ದರ್ಶನ್ ಕ್ಷಮೆ ಕೇಳಲೇ ಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಹೊಸಪೇಟೆಯ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಹೇಳಿದ್ದಾರೆ.

‘ಕ್ರಾಂತಿ’ ರಿಲೀಸ್ ಮಾಡಲು ಬಿಡಲ್ಲದರ್ಶನ್ ಕ್ಷಮೆ ಕೇಳಿಲ್ಲ ಅಂದ್ರೆ, ಅವರ ಸಾಯೋವರೆಗೂ ಅವರ ಸಿನಿಮಾವನ್ನು ಹೊಸಪೇಟೆಯಲ್ಲಿ ರಿಲೀಸ್ ಆಗುವುದಕ್ಕೆ ಬಿಡುವುದಿಲ್ಲ. ದರ್ಶನ್ ಮೊದಲಿನಿಂದ ದೊಡ್ಮನೆಯ ಕಾಲು ಧೂಳಿಗೂ ಸಮಯಿಲ್ಲ ಅಂತ ಹೇಳುತ್ತಿದ್ರಿ. ಅಲ್ಲಿಂದ ಬಂದಿದ್ದು, ಅವರೇ ನಮ್ಮನ್ನು ಬೆಳೆಸಿದ್ದು ಎಂದು ಹೇಳುತ್ತಿದ್ರಿ. ಇವತ್ತು ನಿಮ್ಮ ಬಾಯಿಗಳಲ್ಲಿ ಯಾಕೆ ಇಂತಹ ಮಾತು ಬರುತ್ತಿದೆ” 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ