ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್ಪಿ ನಾಯಕರ ಕಾರ್ಗೆ ಟ್ರಕ್ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್ಪುರಿ ಎಸ್ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.