Breaking News

ಮತ್ತೆ ಸಿ ಎಂ ಬದಲಾವಣೆ ಚರ್ಚೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದೇನು?

Spread the love

ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ‌ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್​​ಗೆ ಸೈಡ್ ಎಫೆಕ್ಟ್ ಆಗಿದೆ. ರಾಹುಲ್ ಗಾಂಧಿ ಹೇಳಿದ ಮೇಲೆ ಡಿಕೆಶಿ ಸಿದ್ದು ಅವರನ್ನು ತಬ್ಬಿಕೊಂಡಿದ್ದಾರೆ.

ಪ್ರೀತಿ ಮತ್ತು ಅಭಿಮಾನ ಒತ್ತಾಯದಿಂದ ಬರೋದಿಲ್ಲ. ವೇದಿಕೆ ಮೇಲೆ ಡಿ.ಕೆ ಶಿವಕುಮಾರ್​​ ಮತ್ತು ಸಿದ್ದರಾಮಯ್ಯ ನ್ಯಾಚ್ಯೂರಲ್ ಆಗಿರಲಿಲ್ಲ. ಅವರಿಬ್ಬರೂ ಆರ್ಟಿಫಿಷಿಯಲ್ ಆಗಿದ್ದರು ಎಂದು ಟೀಕಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ