Breaking News
Home / ರಾಜಕೀಯ / ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!

ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!

Spread the love

ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು.
ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ ಸುಪಾರಿ (Supari) ಕೊಟ್ಟು ಕೊಲ್ಲಿಸಿದ್ದಾರೆ. ವಿಚಾರ ತಿಳಿದು ಇಡೀ ಕಲಬುರಗಿಗೆ ಕಲಬುರಗಿಯೇ ಬೆಚ್ಚಿ ಬಿದ್ದಿದೆ.

ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಕಳೆದ ತಿಂಗಳು ಜುಲೈ 29ರಂದು ಕಲಬುರಗಿ ನಗರದ ಹೊರವಲಯದ ಅಳಂದ ರಸ್ತೆಯ ಕೆರೆಭೋಸ್​ಗಾ ಕ್ರಾಸ್ ಬಳಿಯ ಜಮೀನೊಂದರ ಬಳಿ ಯುವಕನೋರ್ವ ಶವ ಬಿದ್ದಿತ್ತು. ಆತನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು, ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಆತನನ್ನು ಬರ್ಬರವಾಗಿ ಕೊಂದಿದ್ದ ಹಂತಕರು, ಆತ ಪ್ರಾಣ ಬಿಡುತ್ತಲೇ ಅಲ್ಲಿಂದ ಎಸ್ಕೇಪ್ ಆಗಿದ್ದರು.

ಪೊಲೀಸರಿಂದ 6 ಮಂದಿ ಹಂತಕರ ಬಂಧನ

ಈ ಬಗ್ಗೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅವಿನಾಶ್, ಆಸಿಫ್, ರೋಹಿತ್, ಮೋಸಿನ್ ಹಾಗೂ ಅನಿತಾ, ಮೀನಾಕ್ಷಿ ಎಂಬ ಇಬ್ಬರು ಮಹಿಳೆಯರು ಸೇರಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ