Breaking News
Home / ಜಿಲ್ಲೆ / ಬೆಂಗಳೂರು / ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

Spread the love

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಂಗಾರಪೇಟೆ ತಾಲ್ಲೂಕಿನ ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್‌.

ರಮೇಶ್‌ ಕುಮಾರ್‌, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು.

ರಮೇಶ್‌ ಕುಮಾರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ’ ಎಂದು ಕಿಡಿಕಾರಿದ್ದಾರೆ.

ಗಾಂಧಿಗಳ ಹೆಸರು ಹೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆ.ಸಿ ವ್ಯಾಲಿ ಯೋಜನೆಯೂ ಸೇರಿದೆಯಾ’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್‌ಎಸ್, ಎತ್ತಿನಹೊಳೆ, ಕೆ.ಸಿ.ವ್ಯಾಲಿ, ಹೆಚ್‌ಎಎಲ್, ಹೆಚ್‌ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ