Breaking News

ದರೋಡೆ ಮಾಡ್ತಿದ್ದ ಮಂಕಿ ಕ್ಯಾಪ್ ಕಳ್ಳರನ್ನು ಬಂಧಿಸಿದ ಪೊಲೀಸರು

Spread the love

ವಿಜಯಪುರ :ಜಿಲ್ಲೆಯ ಹೆದ್ದಾರಿಗಳಲ್ಲಿ ಮಂಕಿ ಕ್ಯಾಪ್​​ ಧರಿಸಿ ದರೋಡೆ ಮಾಡ್ತಿದ್ದ ಕುಖ್ಯಾತರನ್ನು ಗಾಂಧಿಚೌಕ್​ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಗರ ಬಸ್ ನಿಲ್ದಾಣ ಬಳಿಯ ನಯೇರಾ ಪೆಟ್ರೋಲ್ ಪಂಪ್ ಬಳಿ ದರೋಡೆ ಯತ್ನ ನಡೆಯುತ್ತಿರೋ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ನಬಿರಸೂಲ ಜಿಲಾನಿ ಕೋರವಾರ, ಅವಿನಾಶ ರಮೇಶ ಬಾಗಡೆ, ಅಲ್ತಾಫ್ ಕುತುಬುದ್ದೀನ್ ಐನಾಪುರ, ಮತೀನ ಖಲೀಲ‌ಅಹ್ಮದ್ ಖಾಜಿ, ಸಮೀರ ಅಬ್ದುಲ್ ರಜಾಕ್ ಯರಗಲ್ ಎಂಬುವರನ್ನು ಬಂಧಿಸಲಾಗಿದೆ. ಸರ್ಫರಾಜ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತರಿಂದ 1.5 ಲಕ್ಷ ಮೌಲ್ಯದ ಟವೇರಾ ವಾಹನ, ಕಬ್ಬಿಣದ ರಾಡ್, ಮಂಕಿ ಕ್ಯಾಪ್‌ಗಳು, ಹಗ್ಗ, ಖಾರದ ಪುಡಿ, ಒಂದು ಚಾಕು ಜಪ್ತಿ ಮಾಡಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ