Breaking News

ಮೊಹರಂ ಹಬ್ಬ ಆಚರಣೆ: ಕೊಂಡ ಹಾಯುವಾಗ ನಿಗಿ ನಿಗಿ ಕೆಂಡದಲ್ಲಿ ಬಿದ್ದ ಯುವಕ

Spread the love

ಬೆಳಗಾವಿ: ಮೊಹರಂ ಹಬ್ಬ ಆಚರಣೆ ಸಂದರ್ಭದಲ್ಲಿ ಯುವಕನೊಬ್ಬ ಕೆಂಡ ಹಾಯಲು ಹೋಗಿ ಬೆಂಕಿಯಲ್ಲಿ ಬಿದ್ದ ಘಟನೆ ಸವದತ್ತಿ ತಾಲೂಕಿನ ಕೋ-ಶಿವಾಪೂರ ಗ್ರಾಮದ ನಡೆದಿದೆ.

ಮತ್ತೊಂದೆಡೆ, ಯುವಕನೊಬ್ಬ ಕೆಂಡವನ್ನು ಕೈಯಲ್ಲಿ ಹಿಡಿದು ಜನರ ಮೇಲೆ ಎರಚಿದ ಘಟನೆ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ.

ಮೊಹರಂ ಹಬ್ಬದ ನಿಮಿತ್ತ ಪೂರ್ವಜರು ಮಾಡಿಕೊಂಡು ಬಂದ ಸಂಪ್ರದಾಯದಂತೆ ಕೋ-ಶಿವಾಪೂರ ಗ್ರಾಮದಲ್ಲಿ ಪ್ರತಿ ವರ್ಷವೂ ಕೆಂಡ ಹಾಯಲಾಗುತ್ತದೆ. ಈ ವೇಳೆ ಕೆಂಡ ಹಾಯಲು ಹೋಗಿ ಯುವಕನೊಬ್ಬ ಬೆಂಕಿಗೆ ಬಿದ್ದು ತಕ್ಷಣ ಎದ್ದು ಓಡಿ ಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ‌.

ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ ಮತ್ತೊಂದೆಡೆ, ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ಯುವಕನೊಬ್ಬ ಕೆಂಡ ಹಾಯುವ ವೇಳೆ ಹುಚ್ಚಾಟ ಪ್ರದರ್ಶಿಸಿದ್ದಾನೆ. ಕೈಯಲ್ಲಿ ಕೆಂಡ ಹಿಡಿದು ಜನರ ಮೇಲೆ ಎರಚಿ ವಿಕೃತಿ ಮೆರೆದಿದ್ದಾನೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ