Breaking News

ಕಾಮಗಾರಿ ಪೂರ್ಣಗೊಂಡ್ರೆ ಹೂವಿನ ಮಾಲೆ ಹಾಕುವೆ, ಇಲ್ಲದಿದ್ದರೆ ಬೂಟ್ ನಲ್ಲಿ ಹೊಡೆಯುವೆ: ಉಮೇಶ್ ಕತ್ತಿ

Spread the love

ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ.

ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ ಮಾಡುವ ಭರದಲ್ಲಿ ಎಡವಟ್ಟಿನ ಮಾತನಾಡಿ ಅಧಿಕಾರಿಗೆ ಬೂಟಿನಲ್ಲಿ ಹೊಡೆಯುತ್ತೇನೆ ಎಂದು ಹೇಳಿದ್ದಾರೆ.

 

ಕಾಮಗಾರಿ ವೀಕ್ಷಿಸಿದ ಸಚಿವರು, ವಿಮಾನ ನಿಲ್ದಾಣ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಲೋಕೋಪಯೋಗಿ ಇಲಾಖೆ ಎಇಇಗೆ ಪ್ರಶ್ನಿಸಿದ್ದಾರೆ.

ಡಿಸೆಂಬರ್ ಒಳಗೆ ಕಾಮಗಾರಿ ಮುಗಿಯಲಿದೆ ಎಂದು ಎಇಇ ಹೇಳಿದ್ದಾರೆ. ಡಿಸೆಂಬರ್ ಒಳಗೆ ಕಾಮಗಾರಿ ಮುಗಿಯಲ್ಲ ಎಂದು ಹೇಳಿದ ಸಚಿವ ಉಮೇಶ್ ಕತ್ತಿ, ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿದರೆ ಹೂವಿನ ಮಾಲೆ ಹಾಕುತ್ತೇನೆ. ಇಲ್ಲವಾದರೆ ಬೂಟ್ ನಲ್ಲಿ ಹೊಡೆಯುವೆ ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕ್ಷಕರ ಎದುರೇ ನಿಂದನೆಯ ಮಾತುಗಳನ್ನಾಡಿದ್ದಾರೆನ್ನಲಾಗಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ