ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 8 ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ್ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ.
ಆಗಸ್ಟ್ 21ರಿಂದ 31ರವರೆಗೆ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ಈ 8 ಅಧಿಕಾರಿಗಳು ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದರು. ಕಲ್ಲಿದ್ದಲು ಅಕ್ರಮದಲ್ಲಿ ಸ್ವತ: ಅಧಿಕಾರಿಗಳೇ ಭಾಗಿಯಾದ್ದರು ಎಂಬ ಆರೋಪ ಕೇಳಿಬಂದಿದೆ.