Breaking News

ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿದ

Spread the love

ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಕರಿಸಿದ್ದಪ್ಪ ಕಳಸದ ಮೃತ ದುರ್ದೈವಿ. ಸಿದ್ದನಗೌಡ ದೂಳಪ್ಪ ಹತ್ಯೆಗೈದ ಆರೋಪಿ. ಊಟದ ವಿಚಾರವಾಗಿ ಯೋಧ ಹಾಗೂ ಆತನ ಪತ್ನಿ ವಿದ್ಯಾ ನಡುವೆ ಗಲಾಟೆ ನಡೆದಿದೆ. ಇದರಿಂದ ಬೇಸರಗೊಂಡ ವಿದ್ಯಾ ತನ್ನ ಸಹೋದರ ಸಿದ್ದನಗೌಡನಿಗೆ ಕರೆ ಮಾಡಿ ಹೇಳಿದ್ದಾಳೆ.

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ-ಹೆಂಡತಿ ನಡುವಿನ ಜಗಳ ಬಾಮೈದನವರೆಗೆ ತಲುಪಿದೆ. ಇದರಿಂದ ಕೋಪಗೊಂಡ ಸಿದ್ದನಗೌಡ, ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದೀಯಾ ಎಂದು ಗಲಾಟೆ ಮಾಡಿದ್ದಾನೆ. ಭಾವ-ಭಾಮೈದನ ನಡಿವೆ ಜಗಳ ವಿಕೋಪಕ್ಕೆ ತಿರುಗಿದ್ದು, ಸಿದ್ದನಗೌಡ, ಯೋಧ ಕರಿಸಿದ್ದನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯೋಧ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ