Breaking News
Home / ನವದೆಹಲಿ / ₹20ಗಾಗಿ ಕೋರ್ಟ್‌ ಮೆಟ್ಟಿಲೇರಿದ್ದ ವಕೀಲ: 22 ವರ್ಷಗಳ ಹೋರಾಟದ ಬಳಿಕ ದೊರೆತ ಜಯ

₹20ಗಾಗಿ ಕೋರ್ಟ್‌ ಮೆಟ್ಟಿಲೇರಿದ್ದ ವಕೀಲ: 22 ವರ್ಷಗಳ ಹೋರಾಟದ ಬಳಿಕ ದೊರೆತ ಜಯ

Spread the love

ನವದೆಹಲಿ: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್‌ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ.

1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್‌ಗೆ ಎರಡು ಟಿಕೆಟ್‌ ಪಡೆದಿದ್ದರು.

₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್‌ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು ದಶಕಕ್ಕೂ ಹೆಚ್ಚು ಕಾಲ 120 ಬಾರಿ ವಿಚಾರಣೆ ನಡೆಸಿದೆ. ಅಂತಿಮವಾಗಿ ಚತುರ್ವೇದಿ ಅವರಿಗೆ ₹20 ಹೆಚ್ಚುವರಿ ಶುಲ್ಕದ ಜೊತೆಗೆ 12 ವರ್ಷದ ಬಡ್ಡಿ ಸೇರಿ ₹15,000 ಪರಿಹಾರ ಹಣವಾಗಿ ನೀಡಲು ನ್ಯಾಯಾಲಯ ಆದೇಶ ನೀಡಿದೆ.

‘ಸ್ವತಃ ವಕೀಲನಾಗಿದ್ದೂ ಪ್ರಕರಣದಿಂದ ನೂರಾರು ಗಂಟೆಯ ಶ್ರಮ ಮತ್ತು ₹20,000ಕ್ಕೂ ಹೆಚ್ಚು ಹಣ ವ್ಯಯವಾಗಿದೆ. ಇದು ಹಣದ ಪ್ರಶ್ನೆ ಅಲ್ಲ. ಹಕ್ಕಿನ ಪ್ರಶ್ನೆ. ಒಬ್ಬ ನಾಗರಿಕನಾಗಿ ಭ್ರಷ್ಟ ವ್ಯವಸ್ಥೆಯನ್ನು ಪ್ರಶ್ನಿಸುವುದು ನನ್ನ ಹಕ್ಕು’ ಎಂದು ಚತುರ್ವೇದಿ ತಿಳಿಸಿದ್ದಾರೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ