Breaking News
Home / ರಾಜಕೀಯ / ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

Spread the love

ನವದೆಹಲಿ; ಅತ್ಯುತ್ತಮ ತನಿಖೆ ನಡೆಸಿದ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಸೇರಿದಂತೆ ದೇಶದ 151 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ಲಭ್ಯವಾಗಿದೆ.

ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ರಾಜ್ಯದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮಿ ಗಣೇಶ್ ಕೆ, ಡಿವೈಎಸ್ ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್, ಹೆಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ ಸಚಿವರ ಶ್ರೇಷ್ಠ ತನಿಖಾ ಪದಕ ಘೋಷಿಸಲಾಗಿದೆ.

ಸಿಬಿಐ ನ 15, ಮಹಾರಾಷ್ಟ್ರದ 11, ಉತ್ತರ ಪ್ರದೇಶ, ಮಧ್ಯಪ್ರದೇಶದ ತಲಾ 10 ಕೇರಳ, ರಾಜಸ್ಥಾನ, ಪಶ್ಚಿಮ ಬಂಗಾಳದ ತಲಾ 8 ಅಧಿಕಾರಿಗಳಿಗೆ ಹಾಗೂ ಎನ್ ಐ ಎ ಹಾಗೂ ಎನ್ ಸಿಬಿಯ ತಲಾ 5 ಅಧಿಕಾರಿಗಳು ಸೇರಿದಂತೆ 151 ಅಧಿಕಾರಿಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ