Breaking News
Home / ರಾಜಕೀಯ / ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

Spread the love

ಬೆಂಗಳೂರು: ಹನಿಟ್ರ್ಯಾಪ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟರೊಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಟ ಯುವರಾಜ್ ಬಂಧಿತ. ‘ಮಿಸ್ಟರ್ ಭೀಮರಾವ್’ ಸಿನಿಮಾ ನಾಯಕ ಯುವರಾಜ್​, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರಿಗೆ ಇಬ್ಬರು ಯುವತಿಯರ ಹೆಸರಲ್ಲಿ ಚಾಟ್​ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ್ದ ಆರೋಪ ಕೇಳಿಬಂದಿದೆ.

ಉದ್ಯಮಿ ಕೊಟ್ಟ ದೂರಿನ ಮೇರೆಗೆ ನಟನನ್ನು ಬಂಧಿಸಲಾಗಿದೆ.

ಉದ್ಯಮಿಯೊಬ್ಬರಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯ ಆಗಿದ್ದರು. ಅವರ ಹೆಸರನ್ನು ಬಳಸಿಕೊಂಡು ಉದ್ಯಮಿಗೆ ಯುವರಾಜ್​ ಮೆಸೇಜ್​ ಮಾಡುತ್ತಿದ್ದರಂತೆ. ನಂತರ ಉದ್ಯಮಿಯನ್ನು ಭೇಟಿಯಾಗಿ, ನಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿದ್ದರಂತೆ. ಯುವತಿಯರ ಜತೆ ನೀವು ಅಶ್ಲೀಲ ಚಾಟ್ ಮಾಡಿರುವ ಬಗ್ಗೆ ನಿಮ್ಮ ವಿರುದ್ಧ ಕೇಸ್​ ದಾಖಲಾಗಿದೆ. ಈ ಕೇಸನ್ನು ಇಲ್ಲಿಗೆ ಕೈ ಬಿಡಲು ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದರಂತೆ.

ಆರಂಭದಲ್ಲಿ ಹೆದರಿದ ಉದ್ಯಮಿ, ಮೊದಲಿಗೆ ಐವತ್ತು ಸಾವಿರ ರೂಪಾಯಿ ಕೊಟ್ಟಿದ್ದರಂತೆ. ಮತ್ತೆ ಬ್ಯಾಂಕ್​ನಲ್ಲಿ ಮೂರು ಲಕ್ಷ ಡ್ರಾ ಮಾಡಿ ಕೊಟ್ಟಿದ್ದರಂತೆ. ಹೀಗೆ ಹಂತ ಹಂತವಾಗಿ ಒಟ್ಟು 14 ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ಹೀಗೆ ಪದೇಪದೆ ಹಣ ವಸೂಲಿ ಮಾಡುತ್ತಿದ್ದ ಯುವರಾಜ್​ ಮೇಲೆ ಅನುಮಾನಗೊಂಡ ಉದ್ಯಮಿ, ಇದೀಗ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ