Breaking News

ನೆಹರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ ಎಂದು ಪ್ರಶ್ನಿಸಿದ ಯತ್ನಾಳ

Spread the love

ವಿಜಯಪುರ: ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಪೋಸ್ಟರ್ ಹರಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ, ಕೆಲವು ಜನರಿಗೆ ಇತಿಹಾಸದ ಬಗ್ಗೆ ಮಾಹಿತಿ ಇರುವುದಿಲ್ಲ. ಎರಡು ಸಲ ಕಾಳಾ ಪಾನಿ ಶಿಕ್ಷೆಯನ್ನು ವೀರ ಸಾವರ್ಕರ್​ ಅನುಭವಿಸಿದ್ದರು. ಅಂಡಮಾನ್ ನಿಕೋಬಾರ್ ಜೈಲಿಗೆ ಹೋದರೆ ಸಾವರ್ಕರ್ ಬಗ್ಗೆ ತಿಳಿಯುತ್ತದೆ ಎಂದು ಹೇಳುವ ಮೂಲಕ ಸಾವರ್ಕರ್​​ ವಿರೋಧಿಗಳಿಗೆ ಮಾತಿನಲ್ಲೇ ತಿವಿದರು.

ಕೆಲ ವರು ಅಪ್ರಬುದ್ಧರಿರುತ್ತಾರೆ. ಅವರಿಗೆ ಇದರ ಬಗ್ಗೆ ಗೊತ್ತಿರುವುದಿಲ್ಲ. ಇತಿಹಾಸ ನೆನಪಿಸಿಕೊಡಲು ಪ್ರಧಾನಮಂತ್ರಿ ಈ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ. ಒಂದು ವೇಳೆ ರಾಹುಲ್ ಗಾಂಧಿ ಸಾವರ್ಕರ್ ಬಳಿ ಇದ್ದಿದ್ದರೆ, ಒಂದೇ ತಾಸಿನಲ್ಲಿ ಶರಣಾಗಿ ಇಟಲಿಗೆ ಹೋಗುತ್ತಿದ್ರು ಎಂದು ವ್ಯಂಗ್ಯವಾಡಿದರು.

ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವ ವಿಚಾರವಾಗಿ ಯತ್ನಾಳ ಪ್ರತಿಕ್ರಿಯಿಸಿ, ರಾಜ್ಯಾದ್ಯಂತ ಬೇಕಾದ್ರೂ ಓಡಾಡಲಿ, ಮನೇಲಿ ಬೇಕಾದ್ರು ಓಡಾಡಲಿ. ಯಾರು ಓಡಾಡಬೇಕು ಅನ್ನೋದು ಪಕ್ಷ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ