ವಿಜಯಪುರ: ದೇವಸ್ಥಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿಜಯಪುರದಲ್ಲಿ ಶಿವಲಿಂಗದಲ್ಲೂ ರಾಷ್ಟ್ರಾಭಿಮಾನ ಮೆರೆಯಲಾಗಿದೆ. ವಿಜಯಪುರದ ಜಾಡರ ಗಲ್ಲಿಯಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಲಿಂಗಕ್ಕೆ ರಾಷ್ಟ್ರಧ್ವಜದ ಅಲಂಕಾರ ಮಾಡಿ ಸಂಭ್ರಮಿಸಲಾಯಿತು. ಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ ಈರಯ್ಯ ಸ್ವಾಮಿ ಹಾಗೂ ಸ್ಥಳೀಯರಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
