Breaking News

ಕಣ್ಮನ ಸೆಳೆದ ವಿದ್ಯಾರ್ಥಿಗಳು ಸೃಷ್ಟಿಸಿದ ನಕ್ಷೆ

Spread the love

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೊರಬ ಸಮೀಪದ ಜಡೆ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾಗಿದ್ದ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲೆ ಸೇರಿ 1,200ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಭಾರತ ಮಾತೆಗೆ ವಿಶೇಷ ಗೌರವ ಸಲ್ಲಿಸಿದರು.

 

ಭಾರತದ ನಕ್ಷೆ ಹೋಲುವಂತೆ 1,200 ವಿದ್ಯಾರ್ಥಿಗಳನ್ನು ನಿಲ್ಲಿಸಲಾಗಿದ್ದು, ಕೇಸರಿ, ಬಿಳಿ ಹಾಗೂ ಹಸಿರು ಟೋಪಿ ಧರಿಸಿ ರಾಷ್ಟ್ರಗೀತೆ ಹಾಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಜಿ.ಕುಮಾರ್, ಪ್ರಭಾರ ಬಿಇಒ ಮನಹೋರ, ಜಡೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ, ಪಿಡಿಒ ಚಿದಾನಂದ ಸೇರಿ ವಿವಿಧ ಶಾಲೆಯ ಮುಖ್ಯಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ