Breaking News

ಸರ್ಕಾರದ ಸೌಲಭ್ಯಗಳು ಸಮರ್ಪಕ ಬಳಕೆ ಆಗಲಿ: ಕಡಾಡಿ

Spread the love

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಜಾರಿಗೆ ತರುವ ಸಾಲಸೌಲಭ್ಯಗಳನ್ನು ಕಲ್ಪಿಸಲು ಬ್ಯಾಂಕುಗಳು ಸಹಕರಿಸಬೇಕು. ವಿನಾಕಾರಣ ನೆಪವೊಡ್ಡಿ ಸೌಲಭ್ಯ ನಿರಾಕರಿಸಬಾರದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಆ.16) ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮಗಳಡಿ ಜಿಲ್ಲೆಗೆ ಒಟ್ಟಾರೆ 408 ಕೋಟಿ ರೂಪಾಯಿ ಅನುದಾನ ಹಾಗೂ ಸಾಲ-ಸೌಲಭ್ಯಗಳನ್ನು ಸರಕಾರ ನೀಡುತ್ತಿದ್ದು, ಇದನ್ನು ಬಳಸಿಕೊಂಡು ಆರ್ಥಿಕ ಪ್ರಗತಿ ಯಾಕೆ ಸಾಧಿಸುತ್ತಿಲ್ಲ ಎಂದು ಕಡಾಡಿ ಪ್ರಶ್ನಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ನಿಂದ 365 ಕೋಟಿ ಸಾಲ ಕಲ್ಪಿಸುವ ಗುರಿ ಇದ್ದು, ಅದರಂತೆ 368 ಕೋಟಿ ಸಾಲ ಸೌಲಭ್ಯ ನೀಡಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಗುರಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅದೇ ರೀತಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು, ತಾಂತ್ರಿಕ ದೋಷಗಳು ಎದುರಾಗದಂತೆ ಸಂಭಂದಿಸಿದ ವೆಬ್ ಸೈಟ್ ಮಾರ್ಪಡಿಸಬೇಕು. ಬಾಕಿ ಇರುವ ಅರ್ಜಿಗಳನ್ನು 15 ದಿನಗಳ ಒಳಗಾಗಿ ಪೂರ್ಣಗಳಿಸಿಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ