Breaking News

ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ

Spread the love

ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್​​ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್​​ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ವೀರ ಸಾವರ್ಕರ್​ ಫೋಟೋ ಅಳವಡಿಕೆ ಕುರಿತು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಮುಸ್ಲಿಂ ಏರಿಯಾಗಳು ಏನ್ ದೇಶದ ಹೊರಗೆ ಇದ್ದಾವೆಯೇ ಎಂದು ಒಂದು ಕ್ಷಣ ಗರಂ ಆದರು. ಸಿದ್ದರಾಮಯ್ಯನವರು ಹೀಗೆ ಮಾಡಿಯೇ ಅವರ ಆಳ್ವಿಕೆಯಲ್ಲಿ ಒಂದು ಸಮುದಾಯವನ್ನು ಎತ್ತಿ ಕಟ್ಟಿದ್ದಾರೆ. ಸಾವರ್ಕರ್​​ ಫೋಟೋವನ್ನು ಈ ದೇಶದಲ್ಲಿ ಹಾಕಬಾರದಾ? ಅವರ ಫೋಟೋವನ್ನು ಹಾಕುವುದನ್ನು ನಿಷೇಧ ಮಾಡಲಾಗಿದೆಯೇ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ