Breaking News

ಸ್ವಾತಂತ್ರ್ಯೋತ್ಸವದ ದಿನ ಜೇಬಿನಲ್ಲಿ ಚಾಕು ಯಾಕಿತ್ತು?, ಧ್ವಜ ಇರಬೇಕಿತ್ತು: ಪ್ರಮೋದ ಮುತಾಲಿಕ್

Spread the love

ಧಾರವಾಡ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಗಲಾಟೆ ಆಕಸ್ಮಿಕವಾದದ್ದಲ್ಲ. ಮುಂಬರುವ ಗಣೇಶ ಮೆರವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೂರ್ವನಿಯೋಜಿತವಾಗಿ ಈ ಕೃತ್ಯ ನಡೆದಿದೆ ಎಂದು ಪ್ರಮೋದ ಮುತಾಲಿಕ್ ದೂರಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 40 ವರ್ಷದಿಂದ ಹಿಂದೂ ಮಹಾಸಭಾದ ಗಣೇಶ ಮೆರವಣಿಗೆ ಆಗುತ್ತದೆ. ಈ ಹಿಂದೆ ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರದೆಂದು ಗಲಾಟೆ ಮಾಡಿದ್ದರು. ಆಗಿನಿಂದಲೇ ಸಂಘರ್ಷ ಆರಂಭವಾಗಿದೆ ಎಂದರು.

ಸಾವರ್ಕರ್​ ಓರ್ವ ಪ್ರಖರ ಹಿಂದೂವಾದಿ ಮತ್ತು ರಾಷ್ಟ್ರೀಯವಾದಿ. ಅವರನ್ನು ವಿರೋಧಿಸುವುದು ಸೊಕ್ಕಿನ ನಡೆ. ಈ ವಿರೋಧ ಶುರು ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್‌ಗೆ ನೆಹರೂ, ಇಂದಿರಾ ಗಾಂಧಿ, ಸೋನಿಯಾ, ರಾಹುಲ್ ಮಾತ್ರ ಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಬೇಕಿಲ್ಲ ಎಂದು ಹರಿಹಾಯ್ದರು.


Spread the love

About Laxminews 24x7

Check Also

ವಿಕಸಿತ ಭಾರತ ಪರಿಕಲ್ಪನೆಯ ಕೇಂದ್ರದ ಬಜೆಟ್:ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

Spread the loveಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ