Breaking News

ಏಳು ಕೆಎಸ್‌ಪಿಎಸ್‌ ಅಧಿಕಾರಿಗಳಿಗೆ ಐಪಿಎಸ್‌ಗೆ ಬಡ್ತಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಸೇವೆಯ (ಕೆಎಸ್‌ಪಿಎಸ್‌) ಏಳು ಅಧಿಕಾರಿಗಳಿಗೆ ಭಾರತೀಯ ಪೊಲೀಸ್‌ ಸೇವೆಗೆ (ಐಪಿಎಸ್‌) ಬಡ್ತಿ ನೀಡಲಾಗಿದೆ.

ಸಚಿನ್ ಘೋರ್ಪಡೆ, ಅಮಟೆ ವಿಕ್ರಂ, ಸಜಿತ್‌ ವಿ. ಜೆ, ರಾಮ್‌ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ್‌ ನೇಮಗೌಡ, ಗೋಪಾಲ್‌ ಬಿ.

ಬ್ಯಾಕೋಡ, ಮಹಾನಿಂಗ ನಂದಗಾನ್ವಿ ಬಡ್ತಿ ಪಡೆದವರು.

2021ನೇ ಸಾಲಿನ ಆಯ್ಕೆ ಪಟ್ಟಿಯಲ್ಲಿ ಬಡ್ತಿ ನೀಡಲು ಜುಲೈ 25ರಂದು ಆಯ್ಕೆ ಸಮಿತಿ ಸಭೆ ನಡೆದಿತ್ತು. ಇದೀಗ ಕೇಂದ್ರ ಲೋಕಸೇವಾ ಆಯೋಗ ಈ ಎಲ್ಲ ಅಧಿಕಾರಿಗಳಿಗೆ ಐಪಿಎಸ್‌ ಶ್ರೇಣಿಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಿದೆ. ಈ ಅಧಿಕಾರಿಗಳು ಕರ್ನಾಟಕ ರಾಜ್ಯ ಕೇಡರ್‌ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ