Breaking News

ಜಾಲತಾಣದಲ್ಲಿ ಪರಿಚಯವಾದಾಕೆ ಕರೆದಳು ಅಂತ ಖುಷಿಯಿಂದ ಲಾಡ್ಜ್​ಗೆ ಹೋದ ಯುವಕನಿಗೆ ಕಾದಿತ್ತು ಬಿಗ್​ ಶಾಕ್​!

Spread the love

ಕೊಚ್ಚಿ: ತಂತ್ರಜ್ಞಾನ ಮುಂದುವರೆದಂತೆಲ್ಲಾ ಹೆಚ್ಚು ಹೆಚ್ಚು ದೌರ್ಜನ್ಯ, ಮೋಸ ಪ್ರಕರಣಗಳು ಬೆಳೆಯುತ್ತಲೇ ಸಾಗಿದೆ. ಅದರಲ್ಲಿಯೂ ಸಾಮಾಜಿಕ ಜಾಲತಾಣ ಇಡೀ ಜಗತ್ತನ್ನು ಎಷ್ಟು ಹತ್ತಿರ ಮಾಡುತ್ತಿದೆಯೋ, ಅಷ್ಟೇ ಅಪಾಯಕಾರಿಯಾಗಿಯೂ ಗುರುತಿಸ್ಪಡುತ್ತಿದೆ, ಸೈಬರ್​ ಕ್ರೈಂಗಳ ಸಂಖ್ಯೆಯೂ ಹೆಚ್ಚುತ್ತಲೇ ಸಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಬೇಕು. ಏಕೆಂದರೆ, ವೇಷ ಮರೆಸಿಕೊಂಡು ವಂಚಿಸುವ ಬಹುತೇಕರಿದ್ದಾರೆ. ಒಮ್ಮೆ ಯಾಮಾರಿದಾರೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಘಟನೆ ತಾಜಾ ಉದಾಹರಣೆಯಾಗಿದೆ.

ಕೇರಳ ಮೂಲದ ಮಹಿಳೆಯೊಬ್ಬಳು ಪ್ರೀತಿಯ ನಾಟಕವಾಡಿ, ಯುವಕನೊಬ್ಬನನ್ನು ಲಾಡ್ಜ್​ಗೆ ಕರೆಸಿಕೊಂಡು, ತನ್ನ ಮೂವರು ಫ್ರೆಂಡ್ಸ್​ ಜೊತೆ ಸೇರಿ, ಯುವಕನ ಮೊಬೈಲ್​​ ಫೋನ್​, ಹಣ ಮತ್ತು ಒಡವೆಯನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವಕ ಕೊಟ್ಟಾಯಂನ ವೈಕ್ಕೊಮ್​ ನಿವಾಸಿ. ಈತ ಹನಿಟ್ರ್ಯಾಪ್​ನ ಸಂತ್ರಸ್ತನಾಗಿದ್ದಾನೆ. ಸಂತ್ರಸ್ತ ಎರ್ನಾಕುಲಂ ಕೇಂದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

 


Spread the love

About Laxminews 24x7

Check Also

ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ

Spread the love ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ