Breaking News

ಸಿದ್ದರಾಮಯ್ಯ ಏಲ್ಲಿ ಬೇಕಾದ್ರು ಹೋಗಲಿ, ಮೊಟ್ಟೆ ಎಸೆಯಬೇಡಿ: ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ, ಆಗಸ್ಟ್‌ 19: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದು ಹೇಳಿದ್ದಾರೆ.

 

ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದರೂ ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವ ಕ್ರಮ ಸರಿಯಲ್ಲ. ಸಿದ್ದರಾಮಯ್ಯ ಅಷ್ಟೇ ಅಲ್ಲ ಯಾವ ಪಕ್ಷದ ನಾಯಕರಿಗೂ ಹೀಗೆ ಮಾಡಬಾರದು ಎಂದು ಜೋಶಿ ಹೇಳಿದರು.

 

ಸಿದ್ದರಾಮಯ್ಯನವರು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕರು, ಎಲ್ಲಿ ಬೇಕಾದರು ಅವರು ಹೋಗಿ ಪರಿಶೀಲನೆ ಮಾಡುವ ಹಕ್ಕು ಅವರಿಗಿದೆ. ಆದರೆ, ವೀರ ಸಾವರ್ಕರ ಬಗ್ಗೆ ಮಾತನಾಡುವ ವೇಳೆ ಯಾರ ಮನಸ್ಸಿಗೂ ನೋವು ಆಗದಂತೆ ಮಾತನಾಡಬೇಕು. ಅದು ಎಲ್ಲರೂ ಮೊದಲು ತಿಳಿದುಕೊಳ್ಳಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಾವರ್ಕರ್‌ ಬಿಡುಗಡೆಗೆ ಪತ್ರ ಬರೆದಿದ್ದ ಗಾಂಧೀಜಿ“ಈ ಹಿಂದೆಯೇ ವೀರ ಸಾವರ್ಕರ ಬಗ್ಗೆ ಮಹಾತ್ಮಾ ಗಾಂಧಿಯವರೆ ಮೆಚ್ಚುಗೆ ಮಾತನ್ನು ಆಡಿದ್ದಾರೆ. ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ದರೂ ಇದು ಅವರಿಗೆ ಗೊತ್ತಿಲ್ಲವೇ. ಇನ್ನು ಭಾರತ ದೇಶದ ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ ಇಂದಿರಾಗಾಂಧಿ ಅವರು ಸಹ ವೀರ ಸಾವರ್ಕರ ಭಾರತ ದೇಶ ಗುರುತಿಸಲ್ಪಡುವ ಒಬ್ಬ ವ್ಯಕ್ತಿ ಎಂದು ಹೇಳಿದ್ದರು. ಇಂತವರು ಒರಿಜಿನಲ್ ಕಾಂಗ್ರೆಸ್ ನವರು ವೀರ ಸಾವರ್ಕರ ಬಗ್ಗೆ ತಿಳಿದುಕೊಂಡಿದ್ದರು,” ಎಂದರು.

ಸೋನಿಯಾ, ರಾಹುಲ್ ಮೆಚ್ಚಿಸಲು ಟೀಕೆ

ನಾವು ಪದೇ ಪದೇ ಇಂದಿನ ಕಾಂಗ್ರೆಸ್ ನಾಯಕರು ನಕಲಿ ಕಾಂಗ್ರೆಸ್‌ ನಾಯಕರು ಎಂದು ಹೇಳುವುದು ಅದಕ್ಕೆ. ಸಿದ್ದರಾಮಯ್ಯ ಸೋನಿಯಾ ಹಾಗೂ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಸಾವರ್ಕರ್‌ ಬಗ್ಗೆ ಟೀಕಿಸುತ್ತಿದ್ದಾರೆ, ಇದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ನಕಲಿ ಕಾಂಗ್ರೆಸ್ಸಿನ ನಕಲಿ ಕಾಂಗ್ರೆಸ್ಸಿಗ ಎಂದರು.

ಒಮ್ಮೊಮ್ಮೆ ಕಾಂಗ್ರೆಸ್ಸನ್ನು ಕಿತ್ತೊಗೆಯಬೇಕು ಎನ್ನತ್ತಾರೆ


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ