Breaking News

ಬದಲಿ ರಸ್ತೆ ಮೂಲಕ ಶಿರಾಡಿ ಘಾಟಿಗೆ ಏಕಮುಖ ಸಂಚಾರ

Spread the love

ಸಕಲೇಶಪುರ: ತಾಲೂಕಿನ ಕೆಸಗನಹಳ್ಳಿ ಸಮೀಪ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆ ಹೋಗಲು 20 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳು ಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವಕಾಶ ಕಲ್ಪಿಸಿದ್ದಾರೆ.

 

ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಬೆಳಗ್ಗೆ 9ರಿಂದ 11 ಗಂಟೆ ವರೆಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳಿಗೆ, ಮಧ್ಯಾಹ್ನ 12ರಿಂದ 2 ಗಂಟೆವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಮಧ್ಯಾಹ್ನ 3ರಿಂದ ಸಂಜೆ 6ರ ವರೆಗೆ ಬೆಂಗ ಳೂರಿನಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ