Breaking News

ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ: ವಿಶ್ವನಾಥ್‌

Spread the love

ಮೈಸೂರು: ಜನರು ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯವಾದ ಸಂಗತಿ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದನ್ನು ನಾನು ಸಮರ್ಥಿಸುತ್ತಿಲ್ಲ.

ಆದರೆ, ಜನ ತಮ್ಮ ಆಕ್ರೋಶವನ್ನು ಹೀಗೆ ವ್ಯಕ್ತಪಡಿಸುವುದು ಸಹಜ. ಇದಕ್ಕೆ ಹತ್ಯೆ ಯತ್ನದ ಸ್ವರೂಪ ನೀಡುವುದು ಸರಿಯಲ್ಲ.

ಗಾಂಧಿಗೂ ಸಿದ್ದರಾಮಯ್ಯ ಅವರಿಗೂ ಎಲ್ಲಿಂದ ಎಲ್ಲಿಗೆ ಸಂಬಂಧ ಹೇಳಿ ಎಂದು ಶನಿವಾರ ಸುದ್ದಿಗಾರರ ಜತೆ ಮಾತನಾಡುತ್ತಾ ಪ್ರಶ್ನಿಸಿದರು.

ರಾಜಕೀಯ ನಾಯಕರ ಹತ್ಯೆ ಮಾಡುವಂತಹ ಕೆಟ್ಟ ವಾತಾವರಣ ರಾಜ್ಯದಲ್ಲಿ ಇಲ್ಲ ಎಂದು ಅವರು ಹೇಳಿದರು


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ