ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನು ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು.
ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು. ಹಾಗೆಯೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ “ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್-2021’ಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು.
ಇಲ್ಲಿಯವರೆಗೆ ನ್ಯಾಯಾಲಯದ ಕಲಾಪ ನಡೆಯುತ್ತಿರುವ ಹೊತ್ತಿನಲ್ಲಿ ಮಾತ್ರ, ಸಾಕ್ಷಿಗಳ ವಿಚಾರಣೆ ನಡೆಸಿ, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದಾಗಿತ್ತು. ಇದೂ ಕೂಡ ಆರೋಪಿ ಬಂಧನಕ್ಕೊಳಗಾಗಿದ್ದರೆ ಮಾತ್ರ ಸಾಧ್ಯವಿತ್ತು.