ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ.
ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ.
ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರು. ದೋಣಿ ಮೂಲಕ ರಾತ್ರಿಯೂ ಹುಡುಕಾಟ ನಡೆದಿತ್ತು.